Viral Video: ಪಾಠ ಕೇಳುತ್ತ ಹೃದಯಾಘಾತದಿಂದ ತರಗತಿಯಲ್ಲೇ ಸಾವನ್ನಪ್ಪಿದ ವಿದ್ಯಾರ್ಥಿ!

MPPSC Student Suffers Heart Attack: ಮಧ್ಯಪ್ರದೇಶ ಪಬ್ಲಿಕ್ ಸರ್ವಿಸ್ ಕಮಿಷನ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ರಾಜಾ, ಭಾವರ್ಕುವಾದಲ್ಲಿ ಕೋಚಿಂಗ್ ಇನ್ಸ್ಟಿಟ್ಯೂಟ್‍ಗೆ ಸೇರಿದ್ದ. ಎಂದಿನಂತೆ ಕೋಚಿಂಗ್ ಸೆಂಟರ್​​ಗೆ ಬಂದಿದ್ದ ರಾಜಾ ತರಗತಿಯಲ್ಲಿ ಕುಳಿತು ಪಾಠ ಕೇಳುತ್ತಿದ್ದ. ಆದರೆ ಆತ ತರಗತಿಯಲ್ಲೇ ಏಕಾಏಕಿ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ.

Written by - Puttaraj K Alur | Last Updated : Jan 18, 2024, 05:55 PM IST
  • ಪಾಠ ಕೇಳುತ್ತಿದ್ದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ತರಗತಿಯಲ್ಲೇ ಸಾವನ್ನಪ್ಪಿದ್ದಾನೆ
  • ಮಧ್ಯಪ್ರದೇಶದ ಇಂದೋರ್‍ನ ಕೋಚಿಂಗ್ ಸೆಂಟರ್‍ನಲ್ಲಿ ನಡೆದಿರುವ ಆಘಾತಕಾರಿ ಘಟನೆ
  • ವಿದ್ಯಾರ್ಥಿ ತರಗತಿಯಲ್ಲೇ ಕುಸಿದುಬಿದ್ದಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್
Viral Video: ಪಾಠ ಕೇಳುತ್ತ ಹೃದಯಾಘಾತದಿಂದ ತರಗತಿಯಲ್ಲೇ ಸಾವನ್ನಪ್ಪಿದ ವಿದ್ಯಾರ್ಥಿ! title=
ಪಾಠ ಕೇಳುತ್ತಿದ್ದ ವಿದ್ಯಾರ್ಥಿ ಸಾವು!

ಮಧ್ಯಪ್ರದೇಶ: ಪಾಠ ಕೇಳುತ್ತಿದ್ದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ತರಗತಿಯಲ್ಲೇ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಇಂದೋರ್‍ನಲ್ಲಿ ನಡೆದಿದೆ. ವಿದ್ಯಾರ್ಥಿ ತರಗತಿಯಲ್ಲೇ ಕುಸಿದುಬಿದ್ದಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ನಿವಾಸಿ ರಾಜಾ (18) ಮೃತ ವಿದ್ಯಾರ್ಥಿಯಾಗಿದ್ದು, ಈತ ಉನ್ನತ ವ್ಯಾಸಂಗಕ್ಕಾಗಿ ಇಂದೋರ್‌ನಲ್ಲಿ ನೆಲೆಸಿದ್ದ. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿ ರಾಜಾ ಗುರುವಾರ ಬೆಳಗ್ಗೆ ಇಂದೋರ್‌ನಲ್ಲಿ ಕೋಚಿಂಗ್ ಕ್ಲಾಸ್‌ನಲ್ಲಿ ಪಾಠ ಕೇಳುತ್ತಿದ್ದ. ಈ ವೇಳೆ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ.  

ಇದನ್ನೂ ಓದಿ: ಶ್ರೀರಾಮ ಪ್ರಾಣ ಪ್ರತಿಷ್ಠಾ ಮಹೋತ್ಸವ..! ಜ.22 ರಂದು ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ

ರಾಜಾ ಮಧ್ಯಪ್ರದೇಶ ಪಬ್ಲಿಕ್ ಸರ್ವಿಸ್ ಕಮಿಷನ್ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ. ಭಾವರ್ಕುವಾದಲ್ಲಿ ಕೋಚಿಂಗ್ ಇನ್ಸ್ಟಿಟ್ಯೂಟ್‍ಗೆ ಸೇರಿದ್ದ. ಎಂದಿನಂತೆ ಗುರುವಾರ ಬೆಳಗ್ಗೆ ಕೋಚಿಂಗ್ ಸೆಂಟರ್​​ಗೆ ಬಂದಿದ್ದ ರಾಜಾ ತರಗತಿಯಲ್ಲಿ ಕುಳಿತು ಪಾಠ ಕೇಳುತ್ತಿದ್ದ. ಆದರೆ ಆತ ತರಗತಿಯಲ್ಲೇ ಏಕಾಏಕಿ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಎದೆ ನೋವಿನಿಂದ ನರಳುತ್ತಾ ಕುಳಿತಲ್ಲೇ ಕುಸಿದು ಬಿದಿದ್ದಾನೆ. ಇದನ್ನು ಗಮನಿಸಿದ ಸಹ ವಿದ್ಯಾರ್ಥಿಗಳು ಆತನನ್ನು ಎತ್ತಿ ಬೆಂಚಿನ ಮೇಲೆ ಕೂರಿಸಿದ್ದಾರೆ. ಆದರೆ ಅದಾಗಲೇ ಆತ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ.

ಕೂಡಲೇ ಹತ್ತಿರದ ಆಸ್ಪತ್ರೆಗೆ ರಾಜಾನನ್ನು ಸಾಗಿಸಲಾಯಿತು. ಆದರೆ ವೈದ್ಯರು ಆತ ಸಾವನ್ನಪ್ಪಿದ್ದಾನೆಂದು ದೃಢಪಡಿಸಿದರು. ತರಗತಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಇಡೀ ಘಟನೆಯ ದೃಶ್ಯಾವಳಿ ಸೆರೆಯಾಗಿದೆ. ರಾಜಾ ಪ್ರಜ್ಞೆ ತಪ್ಪಿ ಬಿದ್ದು ಸಾವನ್ನಪ್ಪಿದ ವಿಡಿಯೋ ಇಂಟರ್ನೆಟ್‍ನಲ್ಲಿ ವೈರಲ್ ಆಗುತ್ತಿದೆ. ಅನೇಕರು ವಿಡಿಯೋ ನೋಡಿ ಆಘಾತ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Ram Mandir inauguration: ರಾಮಮಂದಿರದ ಅಂಚೆ ಚೀಟಿ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News