Cauvery dispute: ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್! ತಮಿಳುನಾಡಿಗೆ ನೀರು ಬಿಡುವಂತೆ ಮತ್ತೆ ಆದೇಶ

Cauvery water dispute: ಪ್ರಾಧಿಕಾರರ ಮುಂದೆ ವಾದ ಮಂಡಿಸಿದ ಕರ್ನಾಟಕದ ಅಧಿಕಾರಿಗಳು, ತಮಿಳುನಾಡಿಗೆ ಕಾವೇರಿ ನೀರು ಬಿಡುವುದು ಅಸಾಧ್ಯ. ಈಗಾಗಲೇ ಕರ್ನಾಟಕದಲ್ಲಿ ಸರಣಿ ಬಂದ್‌ ನಡೆಯುತ್ತಿದೆ. ಈ ಪರಿಸ್ಥಿತಿಯಲ್ಲಿ ನೀರು ಬಿಡಲು ಆಗುವುದಿಲ್ಲ ಎಂದು ಹೇಳಿದ್ದಾರೆ

Written by - Zee Kannada News Desk | Last Updated : Sep 29, 2023, 04:25 PM IST
  • ಕರ್ನಾಟಕ ಬಂದ್ ನಡುವೆಯೇ ರಾಜ್ಯಕ್ಕೆ ಮತ್ತೆ ಬಿಗ್ ಶಾಕ್ ಎದುರಾಗಿದೆ
  • ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ
  • ಇತ್ತೀಚೆಗೆ ನೀಡಿದ್ದ ಆದೇಶವನ್ನೇ ಅಕ್ಟೋಬರ್‌ 15ರವರೆಗೆ ಪಾಲಿಸುವಂತೆ CWMA ಸೂಚಿಸಿದೆ
Cauvery dispute: ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್! ತಮಿಳುನಾಡಿಗೆ ನೀರು ಬಿಡುವಂತೆ ಮತ್ತೆ ಆದೇಶ title=
ತಮಿಳುನಾಡಿಗೆ ನೀರು ಬಿಡುವಂತೆ ಮತ್ತೆ ಆದೇಶ!

ನವದೆಹಲಿ: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ವಿರೋಧಿಸಿ ಇಂದು ಕರ್ನಾಟಕ ಬಂದ್‍ಗೆ ಕರೆ ನೀಡಲಾಗಿತ್ತು. ಬಂದ್ ದಿನ ಬೆಂಗಳೂರು ಸೇರಿದಂತೆ ಇಡೀ ಕರ್ನಾಟಕವೇ ಸ್ತಬ್ಧವಾಗಿತ್ತು. ಅತ್ತ ರೈತರು ಮತ್ತು ವಿವಿಧ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ಕರ್ನಾಟಕಕ್ಕೆ ಮತ್ತೆ ಶಾಕ್ ವುಂಟಾಗಿದೆ.

ಹೌದು, ಶುಕ್ರವಾರ ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) ಸಭೆ ನಡೆದಿದ್ದು, ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಆದೇಶಿಸಿದೆ. CWMA ಇತ್ತೀಚೆಗೆ ನೀಡಿದ್ದ ಆದೇಶವನ್ನೇ ಅಕ್ಟೋಬರ್‌ 15ರವರೆಗೆ ಮುಂದುವರಿಸುವಂತೆ ಸೂಚಿಸಿದೆ. ಅದರಂತೆ ಪ್ರತಿ ದಿನವೂ 3,000 ಕ್ಯೂಸೆಕ್ಸ್ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಹೇಳಿದೆ.

ಇದನ್ನೂ ಓದಿ: ನಮ್ಮ ಮನೆ ವಾಚ್‌ಮ್ಯಾನ್‌ ಪಕ್ಕದ ಮನೆಗೆ ನೀರು ಬಿಡ್ತಿದ್ದಾನೆ : ನಟ ಉಪೇಂದ್ರ

ಪ್ರಾಧಿಕಾರರ ಮುಂದೆ ವಾದ ಮಂಡಿಸಿದ ಕರ್ನಾಟಕದ ಅಧಿಕಾರಿಗಳು, ತಮಿಳುನಾಡಿಗೆ ಕಾವೇರಿ ನೀರು ಬಿಡುವುದು ಅಸಾಧ್ಯ. ಈಗಾಗಲೇ ಕರ್ನಾಟಕದಲ್ಲಿ ಸರಣಿ ಬಂದ್‌ ನಡೆಯುತ್ತಿದೆ. ಈ ಪರಿಸ್ಥಿತಿಯಲ್ಲಿ ನೀರು ಬಿಡಲು ಆಗುವುದಿಲ್ಲ ಎಂದು ಹೇಳಿದ್ದರು.

ರಾಜ್ಯದಲ್ಲಿ ನೀರಿನ ಕೊರತೆ ಇದೆ. ಈಗಾಗಲೇ ಪ್ರಾಧಿಕಾರದ ಆದೇಶವನ್ನು ಕರ್ನಾಟಕ ಪಾಲಿಸಿದೆ. ಹೀಗಾಗಿ ಮತ್ತಷ್ಟು ನೀರು ಬಿಡಲು ಸಾಧ್ಯವೇ ಇಲ್ಲ. ಕರ್ನಾಟಕ ಕುಡಿಯುವ ನೀರಿಗಾಗಿ ಹೋರಾಡುತ್ತಿದ್ದರೆ, ತಮಿಳುನಾಡು ಕೃಷಿಗಾಗಿ ನೀರು ಕೇಳುತ್ತಿದೆ. ಸದ್ಯದ ಅಗತ್ಯತೆಯನ್ನು ನೀವೇ ಪರಿಶೀಲಿಸಿ ಎಂದು ಹೇಳಿದರು.

ಇದನ್ನೂ ಓದಿ: ಕಾವೇರಿ ಹೋರಾಟದಲ್ಲಿ ʼತಮಿಳು ನಟ ಸಿದ್ಧಾರ್ಥ್ʼ ಕ್ಷಮೆ ಕೇಳಿದ ಶಿವಣ್ಣ..!

ಮತ್ತೊಂದೆಡೆ ತಮಿಳುನಾಡಿನ ಅಧಿಕಾರಿಗಳೂ ನಮಗೆ ನೀರು ಸಾಕಾಗುತ್ತಿಲ್ಲ, ಈಗ ಹರಿಸುತ್ತಿರುವ ನೀರಿನ ಪ್ರಮಾಣದಿಂದ ಪ್ರಯೋಜನವಿಲ್ಲ. ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಬೇಕು ಅಂತಾ ಪಟ್ಟುಹಿಡಿದರು. ನಮಗೆ ಅಕ್ಟೋಬರ್‌ ತಿಂಗಳ ನೀರನ್ನೂ ಬಿಡಿ ಎಂದು ಅವರು ಸಭೆಯಲ್ಲಿ ವಾದಿಸಿದ್ದಾರೆಂದು ತಿಳಿದುಬಂದಿದೆ. ಈ ಆದೇಶದಿಂದ ಕರ್ನಾಟಕಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News