KRSನಿಂದ ಒಂದು ಹನಿ ನೀರು ಬಿಡಲ್ಲ, ಮತ್ತೆ ಬಂದ್ ಬೇಡ: ಡಿಸಿಎಂ ಡಿ.ಕೆ.ಶಿವಕುಮಾರ್

Cauvery Water Sharing Dispute: ಸುಪ್ರೀಂಕೋರ್ಟ್ ಕೂಡ ಮೌಖಿಕವಾಗಿ ಮೇಕೆದಾಟು ಯೋಜನೆಗೆ ಪೂರಕವಾಗಿ ಮಾತನಾಡಿದೆ. 26 ಜನ ಸಂಸದರು ಸರ್ವಪಕ್ಷ ಸಭೆಯಲ್ಲಿ ರಾಜ್ಯದ ಪರವಾಗಿ ಮಾತನಾಡಿದರು. ಅದರಂತೆ ಈಗ ಪ್ರಧಾನಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿ ಎಂದು ಡಿಕೆಶಿ ಆಗ್ರಹಿಸಿದರು.

Written by - Prashobh Devanahalli | Edited by - Puttaraj K Alur | Last Updated : Sep 27, 2023, 04:32 PM IST
  • ರೈತರ ವಿಷಯದಲ್ಲಿ ಕಾಂಗ್ರೆಸ್ ಸರ್ಕಾರ ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ
  • ಕೆಆರ್‍ಎಸ್‍ನಿಂದ ತಮಿಳುನಾಡಿಗೆ ಒಂದು ಹನಿ ನೀರನ್ನೂ ಹೆಚ್ಚಿಗೆ ಬೀಡುವುದಿಲ್ಲ
  • ಸೆ.29ರ ಕರ್ನಾಟಕ ಬಂದ್ ಬೇಡವೆಂದು ಮನವಿ ಮಾಡಿದ ಡಿಸಿಎಂ ಡಿಕೆಶಿ
KRSನಿಂದ ಒಂದು ಹನಿ ನೀರು ಬಿಡಲ್ಲ, ಮತ್ತೆ ಬಂದ್ ಬೇಡ: ಡಿಸಿಎಂ ಡಿ.ಕೆ.ಶಿವಕುಮಾರ್ title=
ಸೆ.29ರ ಕರ್ನಾಟಕ ಬಂದ್ ಬೇಡ!

ಬೆಂಗಳೂರು: 3,000 ಸಾವಿರ ಕ್ಯೂಸೆಕ್ಸ್ ನೀರಿನಲ್ಲಿ ಯಾವುದೇ ಕಾರಣಕ್ಕೂ ಕೆಆರ್‌ಎಸ್‍ನಿಂದ ಒಂದು ಹನಿ ನೀರನ್ನು ಬಿಡುಗಡೆ ಮಾಡುವುದಿಲ್ಲವೆಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿದ ಮಾತನಾಡಿದ ಅವರು, ‘2,000 ಕ್ಯೂಸೆಕ್ಸ್ ನೀರು ಸಾಮಾನ್ಯವಾಗಿ ಹರಿದು ಹೋಗುತ್ತಿರುತ್ತದೆ. 1,000 ಕ್ಯೂಸೆಕ್ಸ್ ನೀರಿಗೆ ಪರ್ಯಾಯ ವ್ಯವಸ್ಥೆ ಮಾಡುತ್ತೇವೆ. ರೈತರ ವಿಷಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ರಾಜಿಯಾಗುವುದಿಲ್ಲ. ನಮಗೆ ಮಂಡ್ಯ ಭಾಗದ ರೈತರ ಹಿತ ಮುಖ್ಯ’ ಎಂದರು.

ಮೇಕೆದಾಟು ವಿಚಾರ; ದೆಹಲಿಯಲ್ಲಿ ಹೋರಾಟ ಮಾಡಿ

‘ಮೇಕೆದಾಟು ಯೋಜನೆ ಬೇಕು ಎಂದು ವಿರೋಧ ಪಕ್ಷದವರು ಅಧಿಕಾರಿಗಳಿಗೆ ಅರ್ಜಿ ಕೊಟ್ಟಿದ್ದಾರೆ. ಇಲ್ಲಿ ಕೊಟ್ಟರೆ ಏನು ಪ್ರಯೋಜನ, ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡರು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದಾರೆ. ನೀವು ದೆಹಲಿಯಲ್ಲಿ ಹೋರಾಟ ಮಾಡಿ, ಇಲ್ಲಿ ಮಾಡಿದರೆ ಏನು ಪ್ರಯೋಜನ?’ ಎಂದು ಡಿಕೆಶಿ ಪ್ರಶ್ನಿಸಿದರು.

ಇದನ್ನೂ ಓದಿ: ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

‘ಸುಪ್ರೀಂಕೋರ್ಟ್ ಕೂಡ ಮೌಖಿಕವಾಗಿ ಮೇಕೆದಾಟು ಯೋಜನೆಗೆ ಪೂರಕವಾಗಿ ಮಾತನಾಡಿದೆ. 26 ಜನ ಸಂಸದರು ಸರ್ವಪಕ್ಷ ಸಭೆಯಲ್ಲಿ ರಾಜ್ಯದ ಪರವಾಗಿ ಮಾತನಾಡಿದರು. ಅದರಂತೆ ಈಗ ಪ್ರಧಾನಿಯವರನ್ನು ಭೇಟಿಯಾಗಿ ಮನವಿ ಸಲ್ಲಿಸಿ" ಎಂದು ಆಗ್ರಹಿಸಿದರು.

ತಮಿಳುನಾಡಿನ ಜೊತೆ ಡಿ.ಕೆ.ಶಿವಕುಮಾರ್ ಅವರು ಮಾತುಕತೆ ನಡೆಸುತ್ತಿಲ್ಲವೆಂಬ ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿದ ಡಿಕೆಶಿ, ‘ರಾಜ್ಯದ ಹಿತಕ್ಕೆ ಎರಡು ಪಕ್ಷಗಳು ಒಂದಾಗಿದ್ದರೆ, ರಾಜ್ಯದ ಹಿತಕ್ಕಾಗಿ ಮೇಕೆದಾಟು ವಿಚಾರವಾಗಿ ಕೇಂದ್ರದ ಮೇಲೆ ಒತ್ತಡ ತರಲಿ, 3 ವರ್ಷದಲ್ಲಿ ಅಣೆಕಟ್ಟು ಕಟ್ಟುವ ಕೆಲಸ ಮುಗಿಸುತ್ತೇನೆ’ ಎಂದರು.

12,500  ಕ್ಯೂಸೆಕ್ಸ್ ನೀರಿಗೆ ತಮಿಳುನಾಡು ಬೇಡಿಕೆ ಇಟ್ಟಿತ್ತು, ರೈತರು ಮತ್ತು ಕನ್ನಡಪರ ಸಂಘಟನೆಗಳ ಹೋರಾಟದಿಂದ ಸಮಿತಿ 3,000 ಕ್ಯೂಸೆಕ್ಸ್ ನೀರು ಬಿಡುಗಡೆಗೆ ಶಿಫಾರಸ್ಸು ಮಾಡಿದೆ. ಮತ್ತೊಮ್ಮೆ ಹೋರಾಟ ಏತಕ್ಕೆ? ಹೋರಾಟಗಾರರ ಬಗ್ಗೆ ನಮಗೆ ತಕರಾರು ಇಲ್ಲ, ಅವರ ಜೊತೆ ನಾವಿರುತ್ತೇವೆ. ಸೆ.29 ರಂದು ಮತ್ತೊಮ್ಮೆ ಬಂದ್ ಎಂದು ಹೇಳಲಾಗುತ್ತಿದೆ. ಇದರಿಂದ ಸಾವಿರಾರು ಕೋಟಿ ವಹಿವಾಟು ಹಾಳಾಗುತ್ತದೆ. ಶಾಲಾ ಮಕ್ಕಳಿಗೆ ತೊಂದರೆಯಾಗುತ್ತದೆ. ಹೀಗಾಗಿ ಬಂದ್ ಬೇಡವೆಂದು ಇದೇ ವೇಳೆ ಡಿಕೆಶಿ ಮನವಿ ಮಾಡಿದರು.

ಇದನ್ನೂ ಓದಿ: ಸರ್ಕಾರದ ವಿರುದ್ದ ಬೆಂಗಳೂರು ಬಂದ್ ಸಂಪೂರ್ಣ ಯಶಸ್ವಿ

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News