ಡಿಎಂಕೆ ಪ್ರಣಾಳಿಕೆ ಬಗ್ಗೆ ಸಿದ್ದರಾಮಯ್ಯ, ಡಿಕೆಶಿ ನಿಲುವು ತಿಳಿಸಲಿ: ಆರ್‌.ಅಶೋಕ್

ತಮಿಳುನಾಡಿನ ಸಿಎಂ ಎಂ.ಕೆ.ಸ್ಟಾಲಿನ್‌ ತಮ್ಮ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆ ಜಾರಿಯಾಗಲು ಬಿಡಲ್ಲ ಎಂದು ಘೋಷಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಮ್ಮ ನಿಲುವನ್ನು ತಿಳಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದ್ದಾರೆ.

Written by - Ranjitha R K | Last Updated : Mar 21, 2024, 05:48 PM IST
  • ಡಿಎಂಕೆ ತನ್ನ ಪ್ರಣಾಳಿಕೆ ಬಗ್ಗೆ ಸಿಎಂ,ಡಿಸಿಎಂ ನಿಲುವು ತಿಳಿಸಲಿ - ಅಶೋಕ್
  • ಮೈತ್ರಿ ಮುಖ್ಯವೋ ಅಥವಾ ರಾಜ್ಯದ ಹಿತ ಮುಖ್ಯವೋ ಅಶೋಕ್ ಪ್ರಶ್ನೆ
  • ಬೆಂಗಳೂರಿನ ಜನರು ಕುಡಿಯಲು ನೀರಿಲ್ಲದೆ ವಲಸೆ ಹೋಗುತ್ತಿದ್ದಾರೆ
ಡಿಎಂಕೆ ಪ್ರಣಾಳಿಕೆ ಬಗ್ಗೆ ಸಿದ್ದರಾಮಯ್ಯ, ಡಿಕೆಶಿ ನಿಲುವು ತಿಳಿಸಲಿ: ಆರ್‌.ಅಶೋಕ್  title=

ಬೆಂಗಳೂರು : ಮೇಕೆದಾಟು ಯೋಜನೆ ಕುರಿತು ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಮ್ಮ ನಿಲುವನ್ನು ತಿಳಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದ್ದಾರೆ. ಮೈತ್ರಿ ಮುಖ್ಯವೋ ಅಥವಾ ರಾಜ್ಯದ ಹಿತ ಮುಖ್ಯವೋ ಎಂಬುದನ್ನು ಇವರು ಬಹಿರಂಗಪಡಿಸಬೇಕು ಎಂದು  ಆರ್‌.ಅಶೋಕ್ ಒತ್ತಾಯಿಸಿದ್ದಾರೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕೋವಿಡ್‌ ಸಮಯದಲ್ಲಿ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಿದ್ದರು.ತಮಿಳುನಾಡಿನ ಸಿಎಂ ಎಂ.ಕೆ.ಸ್ಟಾಲಿನ್‌ ತಮ್ಮ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆ ಜಾರಿಯಾಗಲು ಬಿಡಲ್ಲ ಎಂದು ಘೋಷಿಸಿದ್ದಾರೆ. ಅಂದು ಡಿ.ಕೆ.ಶಿವಕುಮಾರ್‌ ಮೇಕೆದಾಟುವಿನಲ್ಲಿ ಸ್ನಾನ ಮಾಡಿದ್ದರು. ಆದರೀಗ ಸ್ನಾನಕ್ಕಲ್ಲ, ಮುಖ ತೊಳೆಯಲು ಕೂಡಾ ನೀರಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ :Lok Sabha Election 2024: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಆರ್ಥಿಕ ಪರಿಸ್ಥಿತಿ ಅಯೋಮಯ: ಬಸವರಾಜ ಬೊಮ್ಮಾಯಿ  

ಬೆಂಗಳೂರಿನ ಜನರು ಕುಡಿಯಲು ನೀರಿಲ್ಲದೆ ವಲಸೆ ಹೋಗುತ್ತಿದ್ದಾರೆ. ಇಂತಹ ಸ್ಥಿತಿಯನ್ನು ಈವರೆಗೆ ನಾನಂತೂ ನೋಡಿಲ್ಲ. ಕಾಂಗ್ರೆಸ್‌ ನಾಯಕರು ಕೂಡಲೇ 136 ಶಾಸಕರನ್ನು ತಮಿಳುನಾಡಿಗೆ ಕರೆದುಕೊಂಡು ಹೋಗಿ ಅಲ್ಲಿ ಪ್ರತಿಭಟನೆ ಮಾಡಲಿ. ಕರ್ನಾಟಕದ ಕಾಂಗ್ರೆಸ್ಸಿಗರಿಗೆ INDI ಅಲಯನ್ಸ್‌ ಮುಖ್ಯವೋ ಅಥವಾ ರಾಜ್ಯದ ಹಿತ ಮುಖ್ಯವೋ ಎಂಬುದನ್ನು ಈ ಮೂಲಕ ಸಾಬೀತುಪಡಿಸಬೇಕು ಎದ್ನು ಒತ್ತಾಯಿಸಿದ್ದಾರೆ. 

ವೀಕ್‌ ಸರ್ಕಾರ, ವೀಕ್‌ ಸಿಎಂ : 
ನೀರಿನ ಕೊರತೆ ನೀಗಿಸಬೇಕಾದ ರಾಜ್ಯ ಸರ್ಕಾರ ಟ್ಯಾಂಕರ್‌ ಮಾಫಿಯಾಗೆ ಬೆಂಡಾಗಿದೆ. ಜನರು ನೀರನ್ನು ಮಿತವಾಗಿ ಬಳಸಿ ಎಂದು ಸಲಹೆಗಳನ್ನು ಮಾತ್ರ ನೀಡುತ್ತಿದೆ. ಇದು ವೀಕ್‌ ಸರ್ಕಾರ ಹಾಗೂ ಸಿದ್ದರಾಮಯ್ಯನವರು ವೀಕ್‌ ಸಿಎಂ ಆಗಿದ್ದಾರೆ ಎಂದು ಆರ್ ಅಶೋಕ್ ಹೇಳಿದ್ದಾರೆ. ಸರ್ಕಾರದ ಖಜಾನೆಯಲ್ಲಿ ಹಣ ಇದೆ ಎನ್ನುವುದಾದರೆ ಕುಡಿಯುವ ನೀರು ನೀಡಲಿ, ಪ್ರತಿ ತಾಲೂಕಿಗೆ 50 ಕೋಟಿ ರೂ. ನೀಡಲಿ, ಶಾಸಕರ ನೇತೃತ್ವದಲ್ಲಿ ಸಮಿತಿ ರಚಿಸಿ 10 ಕೋಟಿ ರೂ. ನೀಡಲಿ ಎಂದು ಸವಾಲು ಹಾಕಿದ್ದಾರೆ.  

ಇದನ್ನೂ ಓದಿ : ಯುವ, ಮಹಿಳೆ ಮತ್ತು ಹೊಸ ಮುಖಗಳಿಗೆ ಲೋಕಸಭಾ ಟಿಕೆಟ್ : ಡಿಸಿಎಂ ಡಿ.ಕೆ.ಶಿವಕುಮಾರ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News