Janmashtami 2023 Rashifal: ಇಂದು ಈ 4 ರಾಶಿಯವರಿಗೆ ಕೃಷ್ಣ ಕೃಪೆ, ಸಿರಿವಂತರಾಗುವ ಯೋಗ

Janmashtami 2023 Rashifal: ಇಂದು ಎಲ್ಲೆಡೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದೆ. ಈ ಬಾರಿ ಕೃಷ್ಣ ಜನ್ಮಾಷ್ಟಮಿಯಲ್ಲಿ ಶ್ರೀ ಕೃಷ್ಣ ಪರಮಾತ್ಮನು ಕೆಲವು ರಾಶಿಯವರ ಜೀವನದಲ್ಲಿ ಸುಖ-ಸಂತೋಷದ ಜೊತೆಗೆ ಸಿರಿವಂತರಾಗುವ ಯೋಗವನ್ನೂ ನೀಡಲಿದ್ದಾನೆ ಎಂದು ಹೇಳಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

1 /5

ಇಂದು ಶ್ರೀ ಕೃಷ್ಣಜನ್ಮಾಷ್ಟಮಿಯ ವಿಶೇಷ ದಿನ ಕೆಲವು ರಾಶಿಯವರಿಗೆ ಅದೃಷ್ಟದ ದಿನ ಎಂತಲೇ ಹೇಳಲಾಗುತ್ತಿದೆ. ಈ ದಿನ ಭಗವಾನ್ ಶ್ರೀ ಕೃಷ್ಣನು ಕೆಲವು ರಾಶಿಯವರಿಗೆ ವಿಶೇಷ ಆಶೀರ್ವಾದವನ್ನು ನೀಡಲಿದ್ದು, ಅವರು ಜೀವನದಲ್ಲಿ ಸುಖ-ಸಂತೋಷದ ಜೊತೆಗೆ ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುತ್ತಾರೆ. ಅವರಿಗೆ ಸಿರಿವಂತರಾಗುವ ಯೋಗವೂ ಇದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳು ಯಾವುವು. 

2 /5

ಕರ್ಕಾಟಕ ರಾಶಿಯ ಜನರಿಗೆ ಈ ಬಾರಿಯ ಕೃಷ್ಣ ಜನ್ಮಾಷ್ಟಮಿ ತುಂಬಾ ಮಂಗಳಕರ ಫಲಗಳನ್ನು ನೀಡಲಿದೆ. ಈ ಸಮಯದಲ್ಲಿ ನೀವು ಮಾಡುವ ಪ್ರತಿ ಕೆಲಸದಲ್ಲೂ ಯಶಸ್ಸು ಪ್ರಾಪ್ತಿಯಾಗಲಿದೆ. ವೃತ್ತಿ ಬದುಕಿನಲ್ಲಿ ಉನ್ನತ ಹುದ್ದೆಗೇರುವ ಸಂಭವವಿದೆ. 

3 /5

ಶ್ರೀ ಕೃಷ್ಣನ ಆಶೀರ್ವಾದದಿಂದ ಕನ್ಯಾ ರಾಶಿಯವರಿಗೆ ಪ್ರತಿ ಕೆಲಸದಲ್ಲೂ ವಿಜಯ ದೊರೆಯಲಿದ್ದು, ಕೌಟುಂಬಿಕ ಜೀವನದಲ್ಲಿ ಸುಖ-ಸಂತೋಷವನ್ನು ಕಾಣಬಹುದು.. ವಿದ್ಯಾರ್ಥಿಗಳಿಗೆ ವಿದೇಶ ಪ್ರಯಾಣ ಯೋಗವೂ ಇದೆ. 

4 /5

ಶಿಕ್ಷಣ, ಬರವಣಿಗೆ ಇತ್ಯಾದಿ ಕ್ಷೇತ್ರಗಳಿಗೆ ಸಂಬಂಧಿಸಿದ ವೃಶ್ಚಿಕ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಪ್ರಗತಿಯ ಹೊಸ ಹಾದಿಗಳು ತೆರೆಯಲಿವೆ. ಇದರಿಂದಾಗಿ ಸಮಾಜದಲ್ಲಿ ಕೀರ್ತಿ, ಪ್ರತಿಷ್ಠೆ ಹೆಚ್ಚಳಿದೆ. ನೀವು ಹಿಂದೆ ಮಾಡಿದ ಹೂಡಿಕೆಗಳಿಂದ ಬಂಪರ್ ಲಾಭ ದೊರೆಯಲಿದೆ. ಆದಾಗ್ಯೂ, ಅನಾವಶ್ಯಕ ಖರ್ಚುಗಳಿಗೆ ಕಡಿವಾಣ ಹಾಕಿದರೆ ಖಜಾನೆ ತುಂಬಲಿದೆ. ಒಟ್ಟಾರೆಯಾಗಿ ನಿಮ್ಮ ಪ್ರತಿ ಕೆಲಸದಲ್ಲೂ ಶ್ರೀ ಕೃಷ್ಣನ ವಿಶೇಷ ಆಶೀರ್ವಾದವನ್ನು ಪಡೆಯಬಹುದು. 

5 /5

ಮೀನ ರಾಶಿಯವರಿಗೆ ಕೃಷ್ಣನ ಆಶೀರ್ವಾದದಿಂದ  ಆತ್ಮವಿಶ್ವಾಸ ಹೆಚ್ಚಾಗಲಿದ್ದು, ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ದೊರೆಯಲಿದೆ. ಅಷ್ಟೇ ಅಲ್ಲ, ಹೊಸ ವಾಹನ ಖರೀದಿಸುವ ಯೋಗವೂ ಇದೆ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.