ಬೆಳ್ಳಂಬೆಳಗ್ಗೆಯೇ ಬೆಂಗಳೂರಿನ ಹಲವೆಡೆ ಮಳೆಯ ಆರ್ಭಟ
ಕಚೇರಿ ಸೇರಿ ಇನ್ನಿತರ ಕೆಲಸಕ್ಕೆ ತೆರಳುವವರಿಗೆ ಮಳೆ ಅಡ್ಡಿ
ಎಂಜಿ ರೋಡ್, ಟ್ರಿನಿಟಿ, ಹಲಸೂರು ಸೇರಿ ವಿವಿಧೆಡೆ ಮಳೆ
ಬೆಂಗಳೂರಿನ ಬಹುತೇಕ ಕಡೆ ಮೋಡ ಮುಸುಕಿದ ವಾತಾವರಣ
Karnataka Weather Alert: ಮುಂದಿನ 3 ಗಂಟೆಗಳಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ಒಂದು ಅಥವಾ ಎರಡು ಕಡೆ ಗುಡುಗು ಸಹಿತ ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
Orange Alert In Bengaluru: ರಾಜ್ಯ ಹವಾಮಾನ ಇಲಾಖೆಯ ವರದಿಯ ಪ್ರಕಾರ, ಮೇ 18ರಂದು ಅಂದ್ರೆ ನಾಳೆ ಮಳೆಯಬ್ಬರ ಬೆಂಗಳೂರಲ್ಲಿ ಜೋರಾಗಿ ಇರಲಿದೆಯಂತೆ. ಹೀಗಾದರೆ ಆರ್ಸಿಬಿ ಪ್ಲೇ ಆಫ್ ಕನಸಿಗೆ ತಣ್ಣೀರು ಎರಚಿದಂತಾಗಲಿದೆ.
Bengaluru Rains: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ವರುಣನ ಸಿಂಚನವಾಗಿದೆ. ಎಂಜಿ ರೋಡ್, ಟ್ರಿನಿಟಿ ಸರ್ಕಲ್, ಹಲಸೂರು ಸೇರಿದಂತೆ ಬೆಂಗಳೂರಿನ ವಿವಿದೆಡೆ ಇಂದು ಬೆಳಿಗ್ಗೆಯಿಂದಲೇ ಆರಂಭವಾಗಿದ್ದ ಮಳೆಯಿಂದಾಗಿ
ಕಚೇರಿ, ಸೇರಿ ಇನ್ನಿತರ ಕೆಲಸಕ್ಕೆ ತೆರಳುವವರು ಪರದಾಡುವಂತಾಗಿತ್ತು.
ಈ ವರ್ಷದ ಮಾನ್ಸೂನ್ ಮಳೆ ಕಳೆದ ನಾಲ್ಕು ವರ್ಷಕ್ಕಿಂತ ಕಡಿಮೆ ಇದೆ. 22 ಜಿಲ್ಲೆಗಳಲ್ಲಿ ಈಗಾಗಲೇ ಸಾಕಷ್ಟು ಮಳೆಯ ಕೊರತೆ ಉಂಟಾಗಿದೆ. ಈ ಭಾಗಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರಿನ ಪೂರೈಕೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಈ ಭಾಗದ ಕೆರೆಗಳನ್ನು ಪುನಶ್ಚೇತನಗೊಳಿಸಲು ಯೋಜನೆ ರೂಪಿಸಲಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ಅವರು ತಿಳಿಸಿದರು.
ನಗರದಲ್ಲಿ ಸುರಿದ ಮಳೆಯಿಂದಾಗಿ ಪಿಇಎಸ್ ಕಾಲೇಜ್ ಬಳಿಯ ವೀರಭದ್ರ ನಗರದಲ್ಲಿ ಅಪಾರ್ಟ್ ಮೆಂಟ್ ನ ತಡೆಗೋಡೆ ಸಮೇತ ಮನೆಗಳು ನೆಲಸಮವಾಗಿವೆ.ಇದೆ ವೇಳೆ ತಡೆಗೋಡೆ ಪಕ್ಕದಲ್ಲಿ ನಿಲ್ಲಿಸಿದ್ದ ಎರಡು ಕಾರುಗಳು ಸಂಪೂರ್ಣ ಜಖಂಗೊಂಡಿರುವುದರ ಜೊತೆಗೆ ಮತ್ತೆರಡು ಕಾರುಗಳಿಗೂ ಹಾನಿಯಾಗಿವೆ.ಈ ಘಟನೆಯಲ್ಲಿ ಯಾರಿಗೂ ಸಹ ಹಾನಿಯಾಗಿಲ್ಲ ಎನ್ನಲಾಗಿದೆ.
Bengaluru Rain Updates: ಬೆಂಗಳೂರಿನಲ್ಲಿ ಗುಡುಗು ಸಿಡಿಲಿನಿಂದ ಕೂಡಿದ ಧಾರಕಾರ ಮಳೆ ಸುರಿದಿದ್ದು, ಹಲವೆಡೆ ಮರಗಳು ಧರೆಗುರುಳಿವೆ. ಇದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಗರದಲ್ಲಿ ಕೆಲವು ಕಡೆ ಮನೆಗಳಿಗೆ ನೀರು ನುಗ್ಗಿದ್ದು, ಜನ ಪರದಾಡುವಂತಾಯಿತು.
Bengaluru Rain: ಸಿಲಿಕಾನ್ ಸಿಟಿ, ಗಾರ್ಡನ್ ಸಿಟಿ, ಐಟಿ-ಬಿಟಿ ಹಬ್ ಎಂದೆಲ್ಲಾ ಖ್ಯಾತಿ ಪಡೆದಿರುವ ಬೆಂಗಳೂರನ್ನು ಇಷ್ಟಪಡದವರೇ ಇಲ್ಲ. ಹಾಗೆಯೇ, ಮಳೆಗಾಲ ಬಂತೆಂದರೆ ಬೆಂಗಳೂರನ್ನು ಬೈಯ್ಯದವರೂ ಇಲ್ಲ. ಇದೀಗ ಬೆಂಗಳೂರಿನಲ್ಲಿ ಮಳೆಗಾಲದ ಎಫೆಕ್ಟ್ ಹೇಗಿರಲಿದೆ ಎಂಬ ಬಗ್ಗೆ ಬೆಚ್ಚಿಬೀಳಿಸಿರುವ ವರದಿಯೊಂದು ಬಿಡುಗಡೆ ಆಗಿದ್ದು, ಅದು ಬಿಬಿಎಂಪಿ ಅಧಿಕಾರಿಗಳ ನಿದ್ದೆಗೆಡಿಸಿದೆ.
Bengaluru Rains: ರಾಜ್ಯದ ಕೆಲವು ಭಾಗಗಳಲ್ಲಿ ಬೇಸಿಗೆಗಾಲದ ಮೊದಲ ಮಳೆ ಆರಂಭವಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಮುಂದಿನ 48ಗಂಟೆಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮುಂದಿನ ನಾಲ್ಕು ದಿನಗಳವರೆಗೆ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಮಾಹಿತಿ ಲಭ್ಯವಾಗಿದೆ.
ನಗರದ ಕೆಲವಡೆ ದಟ್ಟವಾಗಿ ಆವರಿಸಿರುವ ಮಂಜು
ಗರಿಷ್ಠ ಉಷ್ಣಾಂಶ 26 ಮತ್ತು ಕನಿಷ್ಠ 15 ಡಿಗ್ರಿ ಸೆಲ್ಸಿಯಸ್
ಮುಂದಿನ 48 ಗಂಟೆಗಳಲ್ಲಿ ಮೋಡ ಕವಿದ ವಾತಾವರಣವಿರುತ್ತದೆ
ಹಗುರ ಮಳೆಯಾಗುವ ಸಾಧ್ಯತೆಯೂ ಇದೆ
Karnataka Rain Update: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು ಈ ಭಾಗಗಳಲ್ಲಿ ಸಾಮಾನ್ಯದಿಂದ ಹಗುರ ಮಳೆ ಆಗಲಿದೆ. ಅಲ್ಲದೇ ಕೆಲವು ಕಡೆಗಳಲ್ಲಿ ಮಂಜು ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜುಲೈ 1ರಿಂದ ಜುಲೈ 19ರವರೆಗೆ ರಾಜ್ಯಾದ್ಯಂತ ಧಾರಾಕಾರ ಮಳೆಯಾಗಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ 365 ಮಿಮೀ ಮಳೆಯಾಗಬೇಕಿತ್ತು. ಆದರೆ, 462 ಮಿಮೀ ಮಳೆಯಾಗುವ ಮೂಲಕ ಕರಾವಳಿ ಭಾಗ, ಉತ್ತರ ಕರ್ನಾಟಕ ಭಾಗ ಸೇರಿದಂತೆ ಇನ್ನು ಹಲವೆಡೆ ಆಗಿರುವ ಅವಾಂತರಕ್ಕೆ ಇದೇ ಕಾರಣ ಎಂದು ಹೇಳಲಾಗಿದೆ.
ರಾಜ್ಯದಲ್ಲಿ ಇಂದು ಸೇರಿದಂತೆ 4 ದಿನಗಳ ಕಾಲ ಭಾರಿ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಭಾಗದಲ್ಲಿ ಅತಿಯಾದ ಮಳೆಯ ಸಂಭವವಿದ್ದು, ರಾಜಧಾನಿ ಬೆಂಗಳೂರಲ್ಲೂ ವರುಣಾರ್ಭಟಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆಯು ರಾಜ್ಯದ ಏಳು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಗುರುವಾರ ಶಾಲೆಗಳಿಗೆ ರಜೆ ಘೋಷಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.