Prajwal Revannada case : ನಿನ್ನೆ ನ್ಯಾಯಲಯ 6 ದಿನಗಳ ಕಾಲ ವಿಚಾರಣೆಗಾಗಿ ಎಸ್ ಐಟಿಗೆ ಸುಪರ್ದಿಗೆ ನೀಡಿದೆ. ಆದರೆ ಆರು ದಿನದ ಬಳಿಕ ಎಸ್ ಐ ಟಿ ಕಸ್ಟಡಿಯಿಂದ ಪ್ರಜ್ವಲ್ ಜೈಲಿಗೆ ಹೋಗಲ್ಲ. ಬದಲಾಗಿ ಕನಿಷ್ಠ 15-20 ದಿನ ಎಸ್ ಐ ಟಿ ವಶದಲ್ಲೇ ಪ್ರಜ್ವಲ್ ಇರಬೇಕಾಗುತ್ತೆ. ಸದ್ಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ನ ಎಸ್ ಐಟಿಯ ಒಂದು ಟೀಮ್ ಕಸ್ಟಡಿಗೆ ಪಡೆದುಕೊಂಡಿದೆ.
ಹಾಸನದ ಹೊಳೆನರಸೀಪುರ, ಬೆಂಗಳೂರಿನ ಸಿಐಡಿ-ಎಸ್ಐಟಿ ಮತ್ತು ಸೈಬರ್ ಪೊಲೀಸರು ದಾಖಲಿಸಿರುವ ಮೂರು ಪ್ರಕರಣಗಳಲ್ಲಿಯೂ ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಪ್ರಜ್ವಲ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ನಡೆಸಿದರು.
ಮೊನ್ನೆಯಷ್ಟೇ ದೇವೇಗೌಡ್ರು ತಮ್ಮ ಮೊಮ್ಮಗನಿಗೆ ಪತ್ರ ಬರೆದು ವಾರ್ನ್ ಮಾಡಿದ್ರು.ಈ ನಡುವೆ ನಾಳೆಯೇ ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ಅವಧಿ ಲಾಸ್ಟ್ ದಿನ. ಈ ಮಧ್ಯೆ ವಿಡಿಯೋ ಬಿಟ್ಟು ಬೆಂಗಳೂರಿಗೆ ಬರ್ತೀನಿ ಎಂದಿದ್ದ ಪ್ರಜ್ವಲ್ ರೇವಣ್ಣ ಬರೋದು ಆಲ್ಮೋಸ್ಟ್ ಕನ್ಫರ್ಮ್ ಆಗಿದೆ.
ಬೆಂಗಳೂರು: ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಜನತಾದಳ, ಬಿಜೆಪಿ ಎಂಬುದಕ್ಕಿಂತ ಹೆಚ್ಚಾಗಿ, ಈ ಪ್ರಕರಣದಲ್ಲಿ ಯಾರು ಭಾಗಿಯಾಗಿರುವುದು ಕಂಡುಬರುತ್ತದೆಯೋ ಅಂತವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತದೆ. ಈಗಾಗಲೇ ಪ್ರಕರಣದಲ್ಲಿ 11-12 ಜನರನ್ನು ಬಂಧಿಸಲಾಗಿದೆ ಎಂದರು.
ಪ್ರಜ್ವಲ್ ರೇವಣ್ಣ ವಿಡಿಯೋದಲ್ಲಿ ಹೇಳಿರುವಂತೆಯೇ ಇದೀಗ ಬೆಂಗಳೂರಿಗೆ ವಾಪಸ್ ಆಗುವ ಸಿದ್ದತೆ ನಡೆಸಿದಂತೆ ಕಾಣುತ್ತಿದೆ. ನಾಳೆ ಮಧ್ಯಾಹ್ನ ಬೆಂಗಳೂರಿಗೆ ಬರಲು ವಿಮಾನ ಟಿಕೆಟ್ ಬುಕ್ ಆಗಿದೆ.
ಬೆಂಗಳೂರಿನ ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸವರು, ಶಾಸಕರು ಠಾಣೆಯೊಳಗೆ ಹೋಗಿ ಗಲಾಟೆ ಮಾಡುತ್ತಾರೆ. ಪೊಲೀಸರ ಮೇಲೆ ದಾಂಧಲೆ ಎಸಗಿದ್ದಾರೆ. ಈ ರೀತಿ ಆಗುವುದಾದರೆ ಸಮಾಜದಲ್ಲಿ ಶಾಂತಿ ಹೇಗಿರುತ್ತದೆ?
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ರಾಜಕಾರಣ ಮಾಡಲೆಂದು ಪತ್ರ ಬರೆಯುವುದಲ್ಲ. ಪೊಲೀಸ್ ಇಲಾಖೆ ಅಧಿಕೃತ ಮಾಹಿತಿ ನೀಡಬೇಕು, ಇಲ್ಲವೇ ಕೋರ್ಟ್ ಆದೇಶ ಇರಬೇಕು ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.
ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ, ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಶ್ರೀ ಹೆಚ್.ಡಿ. ಕುಮಾರಸ್ವಾಮಿಯವರು ಹಗರಣ ಹೊರಬಿದ್ದ ಮೊದಲ ದಿನದಿಂದಲೇ ಪ್ರತಿಪಾದಿಸಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಹೇಳಿದರು.
G C Chandrashekar: ಕಾಂಗ್ರೆಸ್ ಪಕ್ಷ ವಿಧಾನಸಭೆಯಲ್ಲಿ 136 ಸ್ಥಾನಗಳನ್ನು ಗೆದ್ದು ದಳ- ಬಿಜೆಪಿಯನ್ನು ದೂಳಿಪಟ ಮಾಡಿದೆ. ಲೋಕಸಭೆಯಲ್ಲೂ ಕಾಂಗ್ರೆಸ್ ಉತ್ತಮ ಸಾಧನೆ ಮಾಡಲಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರ ಸಮರ್ಥ ನಾಯಕತ್ವ ಇರುವ ತನಕ ಯಾರೂ ಸಹ ಕಾಂಗ್ರೆಸ್ ಪಕ್ಷವನ್ನು ಅಲ್ಲಾಡಿಸಲು ಸಾಧ್ಯವಿಲ್ಲ. ಸರ್ಕಾರವನ್ನು ಅಲ್ಲಾಡಿಸಲು ಯಾರಿಗೂ ಯೋಗ್ಯತೆ ಇಲ್ಲ ಎಂದು ಅವರು ಹೇಳಿದರು.
ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದುಗೊಳಿಸುವಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.