ಇತ್ತೀಚಿಗೆ ನಡೆದ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಹೀನಾಯ ಸೋಲನ್ನು ಕಂಡಿರುವ ಹಿನ್ನಲೆಯಲ್ಲಿ ಈಗ ಆಯಾ ರಾಜ್ಯಗಳ ಪಕ್ಷದ ಅಧ್ಯಕ್ಷರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಬೇಕು ಎಂದು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಆದೇಶಿಸಿದ್ದಾರೆ.
ಪಕ್ಷದ ಅಧ್ಯಕ್ಷ ಸ್ಥಾನ ಪಡೆಯುವಂತೆ ನಾನು ಸೇರಿದಂತೆ ಹಲವು ನಾಯಕರು ಸೋನಿಯಾ ಗಾಂಧಿಯವರ ಕೈ-ಕಾಲು ಹಿಡಿದುಕೊಂಡು ಭಿಕ್ಷೆ ಬೇಡಿಕೊಂಡಿದ್ದೇವು ಎಂಬ ಡಿಕೆಶಿ ಹೇಳಿಕೆಗೆ ಬಿಜೆಪಿ ಟಾಂಗ್ ನೀಡಿದೆ.
ಭಾನುವಾರದಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯ ನಂತರ ಕಾಂಗ್ರೆಸ್ ಪಕ್ಷವು ಸೋನಿಯಾ ಗಾಂಧಿ ಅವರು ಹಳೆಯ ಪಕ್ಷವನ್ನು ಮುನ್ನಡೆಸುತ್ತಾರೆ ಮತ್ತು ಪಕ್ಷದ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರಿಯುತ್ತಾರೆ ಎಂದು ಘೋಷಿಸಿದೆ.
'ಯಾವ ರೀತಿ ಸಂವಿಧಾನ 370ನೇ ವಿಧಿ (Article 370) ನಶಿಸಿ ಹೋಯ್ತೋ ಮತ್ತು ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭಗೊಂಡಿತೋ ಅದೇ ರೀತಿ ಒವೈಸಿ (Owaisi) ಹಾಗೂ ನಿಜಾಮರ (Nizam) ಹೆಸರು ನಸಿಸಿಹೋಗುವ ಕಾಲ ದೂರವಿಲ್ಲ. ಭಾರತ ಇದೀಗ ಎಚ್ಚೆತ್ತುಕೊಂಡಿದೆ' ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಹೇಳಿದ್ದಾರೆ.
Congress foundation day: ಇಂದು ಕಾಂಗ್ರೆಸ್ ನ 137ನೇ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪಕ್ಷದ ಧ್ವಜಾರೋಹಣ ಮಾಡುತ್ತಿದ್ದರು. ಈ ವೇಳೆ ಧ್ವಜ ಕೆಳಗೆ ಬಿದ್ದಿದೆ.
ತನಗೆ ಬೆದರಿಕೆ ಹಾಕುತ್ತಿರುವವರ ವಿರುದ್ಧ ಎಫ್ಐಆರ್ ದಾಖಲಿಸಿದ್ದು (Kangana Ranaut files FIR), ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಂಜಾಬ್ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಬಾಲಿವುಡ್ ನಟಿ ಕಂಗನಾ ರಣಾವತ್, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಕೋರಿದ್ದಾರೆ.
Punjab election 2022: ಕ್ಯಾಪ್ಟನ್ ಅಮರಿಂದರ್ ಸಿಂಗ್ ಇಂದು ಔಪಚಾರಿಕವಾಗಿ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿದ್ದಾರೆ.
Sonia Gandhi Calls Lalu Yadav: ಬಿಹಾರದಲ್ಲಿ ಆರ್ಜೆಡಿ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿ ಕೊನೆಗೊಳ್ಳಲಿದೆ ಎಂಬ ಚರ್ಚೆ ನಡೆಯುತ್ತಿರುವ ನಡುವೆಯೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಆರ್ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಮಂಗಳವಾರದಂದು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಪಕ್ಷಕ್ಕೆ ಬಿಜೆಪಿ ಮತ್ತು ಆರ್ಎಸ್ಎಸ್ನ ಪೈಶಾಚಿಕ ಅಭಿಯಾನದ ವಿರುದ್ಧ ಸೈದ್ಧಾಂತಿಕವಾಗಿ ಹೋರಾಡಲು ಕರೆ ನೀಡಿದ್ದಾರೆ.
ಪಂಜಾಬ್,ರಾಜಸ್ಥಾನ ಮತ್ತು ಛತ್ತೀಸ್ಗಡದ ಮುಖ್ಯಮಂತ್ರಿಗಳು ಮತ್ತು ಮಾಜಿ ರಕ್ಷಣಾ ಸಚಿವ ಎಕೆ ಆಂಟನಿ ಸೇರಿದಂತೆ ಹಲವು ಹಿರಿಯ ನಾಯಕರು ರಾಹುಲ್ ಗಾಂಧಿ ಮತ್ತೆ ಕಾಂಗ್ರೆಸ್ ಪಕ್ಷದ ಸಾರಥ್ಯವನ್ನು ವಹಿಸಿಕೊಳ್ಳಬೇಕೆಂದು ಒತ್ತಾಯಿಸಿದ ಬೆನ್ನಲ್ಲೇ ಅವರು ಈ ನಿರ್ಧಾರವನ್ನು ಪರಿಗಣಿಸುವುದಾಗಿ ಹೇಳಿದ್ದಾರೆ.
ಕಾಂಗ್ರೆಸ್ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶನಿವಾರ ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ (CWC) ತಮ್ಮ ಭಾಷಣದ ಸಮಯದಲ್ಲಿ ನಾನು ಕಾಂಗ್ರೆಸ್ ಪಕ್ಷದ ಪೂರ್ಣಾವಧಿಯ ಮುಖ್ಯಸ್ಥೆ ಎಂದು ಹೇಳಿದರು.
ಅಕ್ಟೋಬರ್ 16 ರಂದು ಕಾಂಗ್ರೆಸ್ ಪಕ್ಷದ ಉನ್ನತ ಮಟ್ಟದ ಸಭೆ ಸಭೆ ಸೇರಲಿದ್ದು, ಈ ಸಂದರ್ಭದಲ್ಲಿ ಪ್ರಸ್ತುತ ರಾಜಕೀಯದ ಪರಿಸ್ಥಿತಿ, ನೂತನ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಹಾಗೂ ಮುಂಬರುವ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಕುರಿತು ಚರ್ಚೆ ನಡೆಯಲಿದೆ ಎನ್ನಲಾಗಿದೆ.
ಸಿದ್ದು ದೆಹಲಿ ಭೇಟಿ ಹಿಂದೆ ಹಲವು ಲೆಕ್ಕಾಚಾರಗಳಿವೆ. ಪ್ರಧಾನಿ ಮೋದಿ ಎದುರಿಸುವ ಸಮರ್ಥ ನಾಯಕನೆಂಬ ಹಿನ್ನೆಲೆ, ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಬಲವರ್ಧನೆ ಕುರಿತು ಸಿದ್ದರಾಮಯ್ಯರ ಸಲಹೆ ಪಡೆಯಲು ಸೋನಿಯಾ ಮುಂದಾಗಿದ್ದಾರೆ ಎನ್ನಲಾಗಿದೆ.
Punjab New CM - 2018 ರ ಮೀ ಟೂ ಚಳುವಳಿಯ ಸಂದರ್ಭದಲ್ಲಿ ಪಂಜಾಬ್ ಮುಖ್ಯಮಂತ್ರಿ ಚರಣಜಿತ್ ಸಿಂಗ್ ಚನ್ನಿ ಗಂಭೀರ ಆರೋಪಗಳನ್ನು ಎದುರಿಸಿದ್ದರು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಹೇಳಿದ್ದಾರೆ. ರಾಜ್ಯ ಮಹಿಳಾ ಆಯೋಗವು ಆಗ ಅವರಿಗೆ ನೋಟಿಸ್ ಕೂಡ ನೀಡಿತ್ತು, ಮತ್ತು ಅವರನ್ನು ವಜಾಗೊಳಿಸಲು ಧರಣಿ ನಡೆಸಿತ್ತು ಎಂದು ಅವರು ಹೇಳಿದ್ದಾರೆ .
Punjab New Chief Minister: ಪಂಜಾಬ್ ಕಾಂಗ್ರೆಸ್ನಲ್ಲಿ (Congress) ನೂತನ ಮುಖ್ಯಮಂತ್ರಿಗಾಗಿ ಇನ್ನೂ ಯಾವುದೇ ಒಂದು ಮುಖದ ಮೇಲೆ ಒಮ್ಮತ ಮೂಡಿಬಂದಿಲ್ಲ. ಈ ಕುರಿತು ಹೇಳಿಕೆ ನೀಡಿದ್ದ ಪಕ್ಷದ ಹಿರಿಯ ಮುಖಂಡೆ ಅಂಬಿಕಾ ಸೋನಿ ಕೇವಲ ಸಿಖ್ ಮುಖ ಮಾತ್ರ ಪಂಜಾಬ್ ಮುಖ್ಯಮಂತ್ರಿಯಾಗಬೇಕು ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.